15.3 C
Munich
Tuesday, March 21, 2023

BS Yediyurappa silence not weakness said BY Vijayendra at Haveri Ranebennur | Karnataka Politics: ಯಡಿಯೂರಪ್ಪ ಸುಮ್ಮನಿರುವುದು ದೌರ್ಬಲ್ಯವಲ್ಲ; ವಿಜಯೇಂದ್ರ

ಓದಲೇಬೇಕು

ಬಿಎಸ್ ಯಡಿಯೂರಪ್ಪ ಸುಮ್ಮನಿದ್ದಾರೆ ಅಂದರೆ ದೌರ್ಬಲ್ಯ ಅಂದುಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಗುಡುಗಿದ್ದಾರೆ.

ಬಿವೈ ವಿಜಯೇಂದ್ರ

ಹಾವೇರಿ: ಬಿಎಸ್ ಯಡಿಯೂರಪ್ಪ (BS Yediyurappa) ಸುಮ್ಮನಿದ್ದಾರೆ ಅಂದರೆ ದೌರ್ಬಲ್ಯ ಅಂದುಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಗುಡುಗಿದ್ದಾರೆ. ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಎಸ್​ವೈ ಅವರ ಮೌನವನ್ನೇ ದೌರ್ಬಲ್ಯ ಅಂದುಕೊಂಡರೆ ಬಹಳ ಪಶ್ಚಾತ್ತಾಪ ಪಡಬೇಕಾಗಲಿದೆ. ರಾಜ್ಯದಲ್ಲಿ ಬಿಜೆಪಿಗೆ ಅಡಿಪಾಯ ಗಟ್ಟಿ ಇದೆ ಅಂದರೆ ಅದಕ್ಕೆ ಕಾರಣ ಯಡಿಯೂರಪ್ಪ. ಆದರೆ, ಅವರನ್ನು ಟೀಕೆ ಮಾಡುವ ಜನರಿದ್ದಾರೆ. ತಮ್ಮ ಕುಟುಂಬ ಬೆಳೆಸಬೇಕು ಅಂತ ಬಿಎಸ್‌ವೈ ರಾಜಕಾರಣ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಆಗಬೇಕಿದೆ. ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾ ಇದ್ದೇವೆ ಎಂದು ಅವರು ಹೇಳಿದ್ದಾರೆ.

ಇಡೀ ಜಗತ್ತು ಮಾರ್ಗದರ್ಶನ ಮಾಡುವಂಥ ನಾಯಕನನ್ನು ಎದುರು ನೋಡುತ್ತಾ ಇತ್ತು. ನಮ್ಮ ಅದೃಷ್ಟ ಇಡೀ ಪ್ರಪಂಚ ದೇಶದ ನಮ್ಮ ಪ್ರಧಾನಿಗಳ ಕಡೆ ತಿರುಗಿ ನೋಡುತ್ತಾ ಇದೆ. ರಷ್ಯಾ – ಉಕ್ರೇನ್ ನಡುವೆ ನಡೆದ ಯುದ್ಧದ ಸಂದರ್ಭದಲ್ಲಿ ಬುದ್ಧಿ ಹೇಳಿವಂಥ ನಾಯಕ ಇರಲಿಲ್ಲ. ಆದರೆ ಮೋದಿಯವರು ಯುದ್ಧ ಬೇಡ, ಜಗತ್ತಿನ ಏಳಿಗೆಗೆ ಯುದ್ದ ಸರಿಯಲ್ಲ, ಯುದ್ಧ ನಿಲ್ಲಿಸಿ ಎಂದು ಸಲಹೆ ಕೊಟ್ಟಿದ್ದರು. ರಷ್ಯಾ ಅಣುಬಾಂಬ್ ದಾಳಿ ಮಾಡಲು ಹೊರಟಿತ್ತು. ಆಗಲೂ ಮೋದಿಯವರು ಬೇಡ ಎಂದು ತಡೆದರು. ಪರಿಣಾಮವಾಗಿ ರಷ್ಯಾ ಅಣುಬಾಂಬ್ ಪ್ರಯೋಗ ಮಾಡಲಿಲ್ಲ. ಇದು ಪ್ರಧಾನಿ ನರೇಂದ್ರ ಮೋದಿಯವರ ಸಾಹಸ ಎಂದು ವಿಜಯೇಂದ್ರ ಬಣ್ಣಿಸಿದರು.

ಇದನ್ನೂ ಓದಿ: Ticket Fight: ರಾಜಕಾರಣದಲ್ಲಿ ಶತ್ರುಗಳ ಸಂಖ್ಯೆ ಹೆಚ್ಚಾದಾಗ ಮಾತ್ರ ಬೆಳೆಯಲು ಸಾಧ್ಯ: ಸಿ.ಟಿ ರವಿಗೆ ಟಾಂಗ್ ಕೊಟ್ಟ ವಿಜಯೇಂದ್ರ

ಕಾಂಗ್ರೆಸ್​​ನವರಿಗೆ ಈ ದೇಶದ ಬಗ್ಗೆ, ಯುವಕರ ಬಗ್ಗೆ ಚಿಂತೆಯೇ ಇಲ್ಲ. ಈ ದೇಶದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ಮಾಡುತ್ತಿರುವ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ. ಬಡವರು ಬಡವರಾಗಿಯೇ ಇರಬೇಕು, ಅನಕ್ಷರಸ್ಥರು ಅನಕ್ಷರಸ್ಥಾರಾಗಿಯೇ ಇರಬೇಕು ಎಂದು ಕಾಂಗ್ರೆಸ್ ಪಕ್ಷದವರು ಬಯಸುತ್ತಾರೆ. ಕಾಂಗ್ರೆಸ್ ಪಕ್ಷ ಈ ದೇಶದಲ್ಲಿ ಬಡತನ ಕಿತ್ತು ಹಾಕೋ ಕೆಲಸ ಮಾಡಲೇ ಇಲ್ಲ ಎಂದು ಅವರು ಹೇಳಿದ್ದಾರೆ.

ಸಿಟಿ ರವಿಗೆ ಟಾಂಗ್ ಕೊಟ್ಟಿದ್ದ ವಿಜಯೇಂದ್ರ

ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ತನ್ನ ಮಗನಿಗಾಗಿ ಬಿಟ್ಟು ಕೊಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ಷೇಪಿಸಿದ್ದರು. ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ವಿಜಯೇಂದ್ರ, ರಾಜ್ಯದಲ್ಲಿ ಬಿಜೆಪಿ ಕಟ್ಟಿದ್ದು ಬಿಎಸ್‌ವೈ ಎಂದು ಸಿಟಿ ರವಿಗೂ ಗೊತ್ತಿದೆ. ಈ ರೀತಿ ಹೇಳಿಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ಶತ್ರುಗಳ ಸಂಖ್ಯೆ ಹೆಚ್ಚಾದಾಗ ಮಾತ್ರ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!