1.2 C
Munich
Tuesday, March 7, 2023

India vs Australia 4th Test Virat Kohli and Rohit Sharma return Team India practice hard for final test | IND vs AUS 4th Test: ನಾಲ್ಕನೇ ಟೆಸ್ಟ್​ಗೆ ಎರಡು ದಿನವಿರುವಾಗ ಅಭ್ಯಾಸಕ್ಕೆಂದು ಬಂದ ವಿರಾಟ್, ರೋಹಿತ್

ಓದಲೇಬೇಕು

Vinay Bhat |

Updated on: Mar 07, 2023 | 10:32 AM

India vs Australia 4th Test: ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

Mar 07, 2023 | 10:32 AM

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಪಡೆದಿರುವ ಭಾರತೀಯ ತಂಡ ಇದೀಗ ಅಂತಿಮ ನಾಲ್ಕನೇ ಟೆಸ್ಟ್​ಗೆ ಸಜ್ಜಾಗುತ್ತಿದೆ. ಮಾರ್ಚ್ 9 ರಿಂದ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಟೆಸ್ಟ್ ಆಯೋಜಿಸಲಾಗಿದೆ.

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಪಡೆದಿರುವ ಭಾರತೀಯ ತಂಡ ಇದೀಗ ಅಂತಿಮ ನಾಲ್ಕನೇ ಟೆಸ್ಟ್​ಗೆ ಸಜ್ಜಾಗುತ್ತಿದೆ. ಮಾರ್ಚ್ 9 ರಿಂದ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಟೆಸ್ಟ್ ಆಯೋಜಿಸಲಾಗಿದೆ.

ಅಂತಿಮ ಕದನಕ್ಕೆ ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ವಿಶ್ರಾಂತಿ ಮುಗಿಸಿ ತಂಡ ಸೇರಿಕೊಂಡಿದ್ದಾರೆ.

ಅಂತಿಮ ಕದನಕ್ಕೆ ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ವಿಶ್ರಾಂತಿ ಮುಗಿಸಿ ತಂಡ ಸೇರಿಕೊಂಡಿದ್ದಾರೆ.

ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದ ಶುಭಮನ್‌ ಗಿಲ್, ಶ್ರೀಕರ್ ಭರತ್, ಶ್ರೇಯಸ್ ಅಯ್ಯರ್ ಸಾಕಷ್ಟು ಅಭ್ಯಾಸ ಮಾಡಿದರು. ದ್ರಾವಿಡ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಇವರ ಜೊತೆ ಸುದೀರ್ಘವಾದ ಸೆಷನ್ ನಡೆಸಿದರು.

ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದ ಶುಭಮನ್‌ ಗಿಲ್, ಶ್ರೀಕರ್ ಭರತ್, ಶ್ರೇಯಸ್ ಅಯ್ಯರ್ ಸಾಕಷ್ಟು ಅಭ್ಯಾಸ ಮಾಡಿದರು. ದ್ರಾವಿಡ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಇವರ ಜೊತೆ ಸುದೀರ್ಘವಾದ ಸೆಷನ್ ನಡೆಸಿದರು.

ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತು. ಆಸೀಸ್ ಸ್ಪಿನ್ ದಾಳಿಗೆ ತಬ್ಬಿಬ್ಬಾದ ಭಾರತೀಯ ಬ್ಯಾಟರ್​ಗಳು ರನ್ ಗಳಿಸಲು ಪರದಾಡಿದರು. ಪರಿಣಾಮ ಕಾಂಗರೂ ಪಡೆ 9 ವಿಕೆಟ್​ಗಳಿಂದ ಗೆದ್ದು ಬೀಗಿತು.

ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತು. ಆಸೀಸ್ ಸ್ಪಿನ್ ದಾಳಿಗೆ ತಬ್ಬಿಬ್ಬಾದ ಭಾರತೀಯ ಬ್ಯಾಟರ್​ಗಳು ರನ್ ಗಳಿಸಲು ಪರದಾಡಿದರು. ಪರಿಣಾಮ ಕಾಂಗರೂ ಪಡೆ 9 ವಿಕೆಟ್​ಗಳಿಂದ ಗೆದ್ದು ಬೀಗಿತು.

ಭಾರತ ಉಳಿದಿರುವ ಒಂದು ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಏರಲಿದೆ.

ಭಾರತ ಉಳಿದಿರುವ ಒಂದು ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಏರಲಿದೆ.

ಇತ್ತ ಆಸೀಸ್ ಪಡೆಗೆ ಕೂಡ ಕೊನೆಯ ಟೆಸ್ಟ್ ಬಹುಮುಖ್ಯ.1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಉಳಿದಿರುವ ಒಂದು ಪಂದ್ಯವನ್ನು ಗೆಲ್ಲಬೇಕಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ.

ಇತ್ತ ಆಸೀಸ್ ಪಡೆಗೆ ಕೂಡ ಕೊನೆಯ ಟೆಸ್ಟ್ ಬಹುಮುಖ್ಯ.1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಉಳಿದಿರುವ ಒಂದು ಪಂದ್ಯವನ್ನು ಗೆಲ್ಲಬೇಕಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ.

ತಾಜಾ ಸುದ್ದಿ


Most Read Stories

Source link

ಇನ್ನಷ್ಟು ಲೇಖನಗಳು

LEAVE A REPLY

Please enter your comment!
Please enter your name here

ಇತ್ತೀಚಿನ ಲೇಖನ

error: Content is protected !!