ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಮೂಲಕ ಈಗಾಗಲೇ ಮತದಾರರನ್ನು ಸೆಳೆಯಲು ಹಲವೆಡೆ ಕಾರ್ಯಕ್ರಮಗಳನ್ನು ನಡೆಸಿದ್ದು, ಪ್ರಚಾರ ಅಭಿಯಾನ ಮುಂದುವರಿಸಿದೆ. ಈ ಮಧ್ಯೆ, ಬಿಜೆಪಿ ಕೂಡ ಭರ್ಜರಿಯಾಗಿಯೇ ಚುನಾವಣಾ ತಯಾರಿ ನಡೆಸುತ್ತಿದ್ದು, ಪಕ್ಷದ ರಾಷ್ಟ್ರಮಟ್ಟದ ನಾಯಕರು ಮತ್ತೆ ಮತ್ತೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಶಿವಮೊಗ್ಗೆ ಭೇಟಿ ನೀಡಲಿದ್ದು, ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. ಆಮೇಲೆ ಬೆಳಗಾವಿಗೂ ಭೇಟಿ ನೀಡಲಿದ್ದಾರೆ. ರಾಜ್ಯ ರಾಜಕೀಯ ವಿದ್ಯಮಾನಗಳ ಇಂದಿನ (ಫೆಬ್ರವರಿ 25) ಲೈವ್ ಅಪ್ಡೇಟ್ಸ್ ಇಲ್ಲಿವೆ.